🔖ಅಬ್ರಹಾಂ ಲಿಂಕನ್ ತನ್ನ ಮಗನನ್ನು ಶಾಲೆಗೆ ಸೇರಿಸುವಾಗ ಶಿಕ್ಷಕರಿಗೆ ಮಾಡಿಕೊಂಡ ಕಳಕಳಿಯ ವಿನಂತಿ ಹೀಗಿತ್ತು
🔖ಆತ್ಮೀಯ ಶಿಕ್ಷಕ ಬಂಧುಗಳೇ,.
🔖ಇದು ನನ್ನೊಂದಿಗೆ ಹುಟ್ಟಿಕೊಂಡ ಕನಸುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಪ್ರಯತ್ನವಷ್ಟೇ…..
🔖ದಯವಿಟ್ಟು ನನ್ನ ಮಗನಿಗೆ ಅಂಕಗಳ ಹುಚ್ಚು ಹಿಡಿಸಬೇಡಿ. 🔖“ಒಂದು ಉನ್ನತ ಹುದ್ದೆ ಹಿಡಿಯುವುದಕ್ಕಾಗಿ ನೀನು ಓದಲಿಕ್ಕೆ ಬಂದಿದ್ದೀಯ….” ಎಂದು ದಯವಿಟ್ಟು ಹೇಳಿಕೊಡಬೇಡಿ.
🔖ಕೆಲಸ ಯಾವುದೇ ಇರಲಿ ಅದನ್ನು ಪ್ರಾಮಾಣಿಕವಾಗಿ ಖುಷಿಯಿಂದ, ಹೆಮ್ಮೆಯಿಂದ ನಿಷ್ಟೆಯಿಂದ ಮಾಡುವುದೇ ಶ್ರೇಷ್ಠ ಎಂಬುದನ್ನು ಹೇಳಿಕೊಡಿ.
🔖ಅವನಿಗೆ ಉತ್ತಮ ಪುಸ್ತಕಗಳ ಹುಚ್ಚು ಹಿಡಿಯುವಂತೆ ಮಾಡಿ, ಶಾಲೆಯ ಪುಸ್ತಕಗಳಷ್ಟೇ ನಮ್ಮ ಮಿತಿ ಎಂಬ ಭ್ರಮೆ ಹುಟ್ಟಿಸಬೇಡಿ.
🔖ಭಯದಲ್ಲಿ ನಡುಗುವ ಬದಲು ಖುಷಿಯಿಂದ ಶಿಸ್ತಿಗೆ ಒಡ್ಡಿಕೊಳ್ಳುವುದನ್ನು ಹೇಳಿಕೊಡಿ.
🔖ಅವನಿಗೆ ಬದುಕು ಕಲಿಸಿ, ಕಷ್ಟಗಳಲ್ಲಿ ಓಡಿ ಹೋಗುವ, ಸುಖ ಬಂದಾಗ ಕುಣಿದಾಡುವುದರ ಬದಲು ಸಮಚಿತ್ತತೆಯಿಂದ ಇರುವುದನ್ನು ಹೇಳಿಕೊಡಿ, ನೋವಿನಲ್ಲೂ ನಗುವುದನ್ನು ಕಲಿಸಿ.
🔖ಎಂದಿಗೂ ಜಾತಿಯ ಬೀಜ ಮೊಳೆಯದಂತೆ ನೋಡಿಕೊಳ್ಳಿ.
🔖ಸಾಧ್ಯವಾದರೆ ಅವನಿಗೆ ಪ್ರಕೃತಿಯಲ್ಲಿ ಕಳೆದುಹೋಗುವುನ್ನು ಹೇಳಿಕೊಡಿ, ಸುರಿಯುವ ಮಳೆಯಲ್ಲಿ ನೆನೆಯುವ, ಚಿಟ್ಟೆಗಳ ಚಂದವನ್ನು ಆನಂದಿಸುವ, ಹಾರುವ ಪಕ್ಷಿಗಳನ್ನು ಎಣಿಸುವ, ಸಾಲಾಗಿ ನಡೆದುಕೊಂಡು ಹೋಗುವ ಇರುವೆಗಳನ್ನು ಹಿಂಬಾಲಿಸುವ, ಬೀಜ ಮೊಳೆಯುವುದನ್ನು ಕಾಯುವ ಕುತೂಹಲ ತುಂಬಿ. 🔖ಗಿಡ ನೆಡಲು ಪಣತೊಡುವ ಮನಸ್ಸು ಬರುವಂತೆ ಮಾಡಿ.
ಬದುಕಿನಲ್ಲಿ ಮೋಸ ಮಾಡಿ ಗೆಲ್ಲುವುದಕ್ಕಿಂತ, ಪ್ರಾಮಾಣಿಕವಾಗಿ ಸೋಲುವುದನ್ನು ಕಲಿಸಿ.
🔖ಅನ್ಯಾಯ ಮಾಡಿ ಗಳಿಸುವುದಕ್ಕಿಂತ, ಒಬ್ಬರಿಗೆ ನೋವು ಮಾಡಿ ಪಡೆಯುವುದಕ್ಕಿಂತ ಪ್ರಾಮಾಣಿಕತೆಯಿಂದ ಸಾಧಿಸಲು ತಿಳಿಸಿ.
🔖ಜೀವನ ತುಂಬಾ ಸುಂದರವಾಗಿದೆ ಎಂಬುದನ್ನು ಹೇಳಿಕೊಡಿ.
🔖ಪ್ರತಿ ಕ್ಷಣದಲ್ಲೂ ಖುಷಿಯಿದೆ ಎಂಬುದನ್ನು ಅವನು ತಿಳಿಯಲಿ.
🔖ಹೆಣ್ಣನ್ನು ಗೌರವಿಸುವ, ದೀನ ದುರ್ಬಲರನ್ನು, ವಯೋ ವೃದ್ಧರನ್ನು ನೋಡಿ ಮರುಗುವ ಗುಣ ಕಲಿಸಿ, ಕಷ್ಟದಲ್ಲಿ, ನೋವಿನಲ್ಲಿರುವವರ ಸಹಾಯಕ್ಕೆ ಧಾವಿಸುವ ಛಲ ಬರುವಂತೆ ಮಾಡಿ.
🔖ಫೇಲಾದರೂ ಪರವಾಗಿಲ್ಲ ಬದುಕಿನಲ್ಲಿ ಖುಷಿಯಾಗಿ ದುಡಿದು ಜೀವಿಸುವುದನ್ನು ಕಲಿಸಿ.
🔖ನಾನು ಅವನನ್ನು ಒಬ್ಬ ಡಾಕ್ಟರ್, ಎಂಜಿನಿಯರ್, ಉನ್ನತ ಅಧಿಕಾರಿಗಿಂತ ಒಳ್ಳೆಯ ಮನುಷ್ಯನಾಗಿ ಬಾಳುವುದನ್ನು ಕಾಣ ಬಯಸುತ್ತೇನೆ.
💐ಅವನಿಗೆ ಇಂಥ ಗುಣಗಳನ್ನು ರೂಢಿಸಿದರೆ ನಾನು ನಿಮಗೆ ಋಣಿ…
Sunday, June 23, 2019
ಅಬ್ರಹಾಂ ಲಿಂಕನ್ ಪತ್ರ
Subscribe to:
Post Comments (Atom)
No comments:
Post a Comment